Showing posts with label ಜಾಹೀರಾತು. Show all posts
Showing posts with label ಜಾಹೀರಾತು. Show all posts

Sunday, 17 July 2011

ಕಲೆ ಒಳ್ಳೆಯದು..!

ಬೇಡ..
ಮುದ್ದೆಯಾಗಿ ಬಿದ್ದುದನ್ನು
ಎತ್ತಿ ಕುಡುಗಿ...
ಅರ್ಧ ಮೇಲೆ ಮಡಿಸಿದ
ಕೈ ಪೂರ್ತಿ ಬಿಡಿಸಿ
ಉಲ್ಟಾ ಮಾಡಿ
ಸಾಬೂನಿನ ಹಾಲ್ನೊರೆ
ನೀರಲ್ಲಿ ದಿನವಿಡೀ ನೆನೆಸಿ
ತಿಕ್ಕಿ ತೊಳೆದು
ನೀರಲ್ಲಿ ಅದ್ದದ್ದಿ ತೆಗೆದು
ಹಿಂಡಿ ತಂತಿ ಮೇಲೆಸೆದು
ಗಾಳಿಗೆ ಹಾರದಂತೆ
ಕ್ಲಿಪ್ಪಿನಿಂದ ಬಂದಿಸುವ ಮೊದಲು
ಒಮ್ಮೆ ಸರಿಯಾಗಿ ನೋಡು...

ನಿನ್ನೆ ರಾತ್ರಿ ನನ್ನನಪ್ಪಿ

ನೀನಿತ್ತ ಮುತ್ತು ಗುರಿ ತಪ್ಪಿ
ಅಂಗಿಯ ಮೇಲೆ
ಕೆಂದುಟಿಯ ಕಲೆ ಮೂಡಿದೆ..

ನೀ ಮತ್ತೆ ಮರಳಿ ಬರುವವರೆಗೆ

ಮುತ್ತ ಹೊತ್ತು ತರುವವರೆಗೆ
ನೋಡಿ ಸಂಭ್ರಮಿಸಬೇಕು ನಾನು...
ನೆನಪ ಮಳೆಯಲಿ ನೆನೆದು
ವಿರಹಾಗ್ನಿ ಸುಡದಂತೆ
ನಿನ್ನ ಕಾಯಬೇಕು ನಾನು..

ಹೊಸ ಅಂಗಿ ಕಲೆಯಾಯ್ತೆಂದು

ಬೇಸರ ಬೇಡ..
ಕಲೆಯಿಂದ ಒಳ್ಳೆಯದಾಗೋದಾದ್ರೆ
ಕಲೆ ಒಳ್ಳೆಯದು..!!