~ ೧ ~
ಸ್ವಾರ್ಥಿಗಳ ಲೋಕವಿದು
ಗೆಳೆಯಾ..ಜನರೆದುರು
ಗೆಳೆಯಾ..ಜನರೆದುರು
ಕಣ್ಣೀರ ಸುರಿಸದಿರು.. ಅದು ತಪ್ಪು...
ಮನದ ಗಾಯಗಳ
ತಪ್ಪಿಯೂ ತೋರದಿರು..
ಎಲ್ಲ ಕೈಯ್ಯಲ್ಲಿ ಹಿಡಿದಿಹರು ಉಪ್ಪು...!!
~ ೨ ~
ಕಾಡದಿರಿ ನೆನಪುಗಳೇ ಇಂದು..
ಜಗದ ಮೆರವಣಿಗೆಯಲಿ
ನಾನು ಸಹ ಒಂದಾಗಿ ಸಾಗ ಬೇಕು
ಜಿನುಗುವಾ ಕಣ್ಣೀರ
ಮರೆಸಿ ನಾ ಮರೆಯಲ್ಲಿ
ಸುಮ್ಮನೆ ಸುಳ್ಳು ನಗೆ ನಗ ಬೇಕು..!
~ ೩ ~
ಬಂಧನದ ಭಯವಿರದೆ
ದಣಿಯದೇ ಕುಣಿಯುತಿಹೆ
ನೋಡಿ ನರ್ತನದಾ ಹೆಜ್ಜೆ..
ಬೆಸೆದು ಬೀಗಿಹನು ಕಾಲ
ಕಾಲ್ಗಳಲಿ ಸರಪಳಿಯ..
ನನಗದುವೆ ಬಣ್ಣದಾ ಗೆಜ್ಜೆ..!!
~ ೨ ~
ಕಾಡದಿರಿ ನೆನಪುಗಳೇ ಇಂದು..
ಜಗದ ಮೆರವಣಿಗೆಯಲಿ
ನಾನು ಸಹ ಒಂದಾಗಿ ಸಾಗ ಬೇಕು
ಜಿನುಗುವಾ ಕಣ್ಣೀರ
ಮರೆಸಿ ನಾ ಮರೆಯಲ್ಲಿ
ಸುಮ್ಮನೆ ಸುಳ್ಳು ನಗೆ ನಗ ಬೇಕು..!
~ ೩ ~
ಬಂಧನದ ಭಯವಿರದೆ
ದಣಿಯದೇ ಕುಣಿಯುತಿಹೆ
ನೋಡಿ ನರ್ತನದಾ ಹೆಜ್ಜೆ..
ಬೆಸೆದು ಬೀಗಿಹನು ಕಾಲ
ಕಾಲ್ಗಳಲಿ ಸರಪಳಿಯ..
ನನಗದುವೆ ಬಣ್ಣದಾ ಗೆಜ್ಜೆ..!!




